ನಾಪೆÇೀಕ್ಲು, ಸೆ. 23: ನಾಪೆÇೀಕ್ಲು ಲಯನ್ಸ್ ಕ್ಲಬ್ ವತಿಯಿಂದ ಸಮೀಪದ ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ವನ ಮಹೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭ ಶಾಲಾ ಆವರಣದಲ್ಲಿ ಹಲಸು, ಮಾವು, ಸಂಪಿಗೆ ಸೇರಿದಂತೆ ವಿವಿಧ ಬಗೆಯ ಸುಮಾರು 100 ಗಿಡಗಳನ್ನು ನೆಡಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಮುಕ್ಕಾಟಿರ ವಿನಯ್ ವನಮಹೋತ್ಸವ ಮತ್ತು ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸೀತಾರಾಮ್, ಮುಖ್ಯ ಶಿಕ್ಷಕಿ ಚಂಪಕಾ, ಸಹಶಿಕ್ಷಕ ಸುಬ್ರಮಣಿ, ಲಯನ್ಸ್ ಕ್ಲಬ್ ಖಜಾಂಚಿ ಕನ್ನಂಬಿರ ಸುಧಿ ತಿಮ್ಮಯ್ಯ, ಖಜಾಂಚಿ ಬೊಳ್ಳಂಡ ಶ್ಯಾಮ್ ಕುಟ್ಟಪ್ಪ, ಪೆÇೀಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.