ಸುಂಟಿಕೊಪ್ಪ, ಸೆ. 24: ಖಾಸಗಿ ಶಾಲಾ ಮಕ್ಕಳಂತೆ ಸರಕಾರಿ ಶಾಲೆಗಳಿಗೆ ಬರುವ ಮಕ್ಕಳಿಗೆ ತಾರತಮ್ಯ ಬಾವನೆ ಹೋಗಲಾಡಿ ಸುವ ದಿಸೆಯಲ್ಲಿ ಪ್ರತಿ ವರ್ಷವೂ ಒಂದೊಂದು ಶಾಲೆಗಳಿಗೆ ಬೇಕಾದ ಮೂಲಭೂತ ಸೌಲಭ್ಯ ಹಾಗೂ ಸಮವಸ್ತ್ರಗಳನ್ನು ಒದಗಿಸಲಾಗುತ್ತಿದೆ ಎಂದು ಕುಶಾಲನಗರ ರೋಟರಿ ಸಂಸ್ಥೆಯ ಅಧ್ಯಕ್ಷ ಜೇಕಬ್ ಹೇಳಿದರು.

ಗದ್ದೆಹಳ್ಳದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟೈ, ಬೆಲ್ಟ್ ಹಾಗೂ ಐ.ಡಿ ಕಾರ್ಡುಗಳನ್ನು ವಿತರಿಸಿ ಅವರು ಮಾತನಾಡಿದರು.

ಶಾಲಾ ಶಿಕ್ಷಕಿ ಶೈಲಾ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಅಧ್ಯಕ್ಷತೆ ಯನ್ನು ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯನಿ ಪುಷ್ಪಾ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ರೋಟರಿ ಮಾಜಿ ಅಧ್ಯಕ್ಷ ಕ್ರೀಜ್‍ವಾಲ್ ಕೋಟ್, ಮಹೇಶ್ ಮತ್ತಿತರರು ಇದ್ದರು.