ಮಡಿಕೇರಿ, ಸೆ. 27 : ಮಡಿಕೇರಿ ನಗರ ಕಾಂಗ್ರೆಸ್‍ನ ಎಲ್ಲಾ ಬೂತ್ ಸಮಿತಿಗಳಿಗೆ ನೂತನ ಪದಾಧಿಕಾರಿ ಗಳನ್ನು ನೇಮಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವುಮಾದಪ್ಪ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನಗರಸಭಾ ಚುನಾವಣೆ ತಯಾರಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಪಕ್ಷದ ಬಲವರ್ಧನೆ ಕುರಿತು ಸಲಹೆ ಸೂಚನೆಗಳನ್ನು ನೀಡಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಮಾತನಾಡಿ ಕಾರ್ಯಕರ್ತರ ಪರಿಶ್ರಮದಿಂದ ನಗರದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಮುಂಬರುವ ನಗರಸಭಾ ಚುನಾವಣೆಯಲ್ಲಿ ಅತ್ಯಧಿಕ ವಾರ್ಡ್‍ಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ಅಪ್ರು ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರುಗಳಾದ ಹೆಚ್.ಎಂ. ನಂದಕುಮಾರ್, ಚುಮ್ಮಿದೇವಯ್ಯ, ಪ್ರಕಾಶ್ ಆಚಾರ್ಯ, ತಜಸ್ಸುಂ, ಮಾಜಿ ಸದಸ್ಯ ಟಿ.ಎಂ.ಅಯ್ಯಪ್ಪ, ಶ್ರೀ ಓಂಕಾರೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಪುಲಿಯಂಡ ಜಗದೀಶ್, ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಪ್ರಭುರೈ, ಮೋಹನ್ ಕುಮಾರ್, ಮುನೀರ್ ಮಾಚರ್ ಅವರು ಈ ಸಂದರ್ಭ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯೆ ವೀಣಾಅಚ್ಚಯ್ಯ, ಕೆ.ಪಿ.ಸಿ.ಸಿ ಉಪಾಧ್ಯಕ್ಷÀ ಮಿಟ್ಟುಚಂಗಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ರಾಜೀವ್ ಗಾಂಧಿ ಪಂ. ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ, ಜೋಸೆಫ್, ಎಂ.ಎಂ. ಉಸ್ಮಾನ್, ಕೆ.ಎಂ.ವೆಂಕಟೇಶ್, ಉದಯ್ ಕುಮಾರ್, ಗಿಲ್ಬರ್ಟ್ ಲೋಬೊ, ಯತೀಶ್ ಸೇರಿದಂತೆ ನಗರ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು. ಪ್ರಕೃತಿ ವಿಕೋಪದಿಂದ ಮೃತಪಟ್ಟವರಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.