ಸೋಮವಾರಪೇಟೆ, ಅ. 3: ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಶಿಕ್ಷಕರು ಹಾಗೂ ಪೋಷಕರು ಮುಂದಾಗಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ ಸಿ.ಕೆ. ಶಿವಕುಮಾರ್ ಕರೆ ನೀಡಿದರು.
ಇಲ್ಲಿನ ಓಎಲ್ವಿ ಕಾನ್ವೆಂಟ್ನಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಾ ಅಭಿಯಾನ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೆ.ಬಿ. ಪ್ರಕಾಶ, ಪ್ರಮುಖರಾದ ಲೋಕೇಶ್ ಆರ್.ಡಿ., ಓಎಲ್ವಿ ಕಾನ್ವೆಂಟ್ನ ಮುಖ್ಯಸ್ಥೆ ಮಮತ, ಸೆರಿನ್ ಮತ್ತಿತರರು ಇದ್ದರು. ಶಿಕ್ಷಣ ಸಂಯೋಜಕ ಶೇಖರ್ ಪ್ರಾಸ್ತಾವಿಕ ನುಡಿಯಾಡಿದರು. ನಂತರ 8 ರಿಂದ 10ನೇ ತರಗತಿ ಮಕ್ಕಳಿಗೆ ಪ್ರತಿಭಾ ಕಾರಂಜಿ ಮತ್ತು 9 ರಿಂದ 12ನೇ ತರಗತಿ ಮಕ್ಕಳಿಗೆ ಕಲೋತ್ಸವ ಸ್ಪರ್ಧೆಗಳು ಜರುಗಿದವು.