ಸೋಮವಾರಪೇಟೆ: ವ್ಯಕ್ತಿಯ ಪರಿಪೂರ್ಣತೆಗೆ ಮೌಲ್ಯಯುತ ಶಿಕ್ಷಣ ಅನಿವಾರ್ಯವಾಗಿದ್ದು, ವಿದ್ಯಾರ್ಥಿಗಳಿಗೆ ಸಾಮಾಜಿಕ ಮೌಲ್ಯದೊಂದಿಗೆ ಸಂಸ್ಕಾರಯುತ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕೆಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಮತ್ತು ಡಾ. ರಾಧಾಕೃಷ್ಣನ್ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್. ಚೇತನ್ ಮಾತನಾಡಿ, ಶಿಕ್ಷಕರು ಇಂದು ಇತರ ಇಲಾಖೆಗಳ ಕೆಲಸವನ್ನೂ ನಿರ್ವಹಿಸಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಬೋಧನೆಯ ಕೆಲಸವನ್ನು ಬಿಟ್ಟು ಅನ್ಯ ಕೆಲಸವನ್ನು ಮಾಡಲು ಸರಕಾರ ಒತ್ತಡ ಹೇರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಾ.ಪಂ. ಅಧ್ಯಕ್ಷೆ ಪುಷ್ಪ ರಾಜೇಶ್ ಕಾರ್ಯಕ್ರಮ ಸೋಮವಾರಪೇಟೆ: ವ್ಯಕ್ತಿಯ ಪರಿಪೂರ್ಣತೆಗೆ ಮೌಲ್ಯಯುತ ಶಿಕ್ಷಣ ಅನಿವಾರ್ಯವಾಗಿದ್ದು, ವಿದ್ಯಾರ್ಥಿಗಳಿಗೆ ಸಾಮಾಜಿಕ ಮೌಲ್ಯದೊಂದಿಗೆ ಸಂಸ್ಕಾರಯುತ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕೆಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಮತ್ತು ಡಾ. ರಾಧಾಕೃಷ್ಣನ್ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್. ಚೇತನ್ ಮಾತನಾಡಿ, ಶಿಕ್ಷಕರು ಇಂದು ಇತರ ಇಲಾಖೆಗಳ ಕೆಲಸವನ್ನೂ ನಿರ್ವಹಿಸಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಬೋಧನೆಯ ಕೆಲಸವನ್ನು ಬಿಟ್ಟು ಅನ್ಯ ಕೆಲಸವನ್ನು ಮಾಡಲು ಸರಕಾರ ಒತ್ತಡ ಹೇರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಾ.ಪಂ. ಅಧ್ಯಕ್ಷೆ ಪುಷ್ಪ ರಾಜೇಶ್ ಕಾರ್ಯಕ್ರಮ ಮಡಿಕೇರಿ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಡಿಕೇರಿ ಶಾಖೆಯಲ್ಲಿ ರಾಜರಾಜೇಶ್ವರಿ ಶಾಲೆಯ ಸಂತ್ರಸ್ತ ವಿದ್ಯಾರ್ಥಿಗಳಿಗೆ ಹಾಸಿಗೆ, ದಿಂಬು, ಕಂಬಳಿಯನ್ನು ಮುಖ್ಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯತ್ರಿಜೀ ದಿವ್ಯ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಶಾಲೆಯ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು. ನಂತರ ಎಲ್ಲರಿಗೂ ಪ್ರಸಾದ ವಿತರಿಸಲಾಯಿತು.
ಕೂಡಿಗೆ: ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಖಜಾಂಚಿ ಎಂ.ಬಿ. ಜಯಂತ್ ವಹಿಸಿದ್ದರು.
ಗಾಂಧಿ ಜಯಂತಿ ಅಂಗವಾಗಿ ಮೂಲ ಶಿಕ್ಷಣದ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕ ಸಿ. ದುರ್ಗೇಶ್ ಶಿಕ್ಷಣದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ಆಡಳಿತ ಮಂಡಳಿಯ ಸದಸ್ಯ ಎಂ.ಬಿ. ಮೊಣ್ಣಪ್ಪ, ಬಿ.ವಿ. ಅರುಣ್ಕುಮಾರ್, ಪೋಷಕ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್, ಸದಸ್ಯರಾದ ದಕ್ಷಣಾಮೂರ್ತಿ, ಮಕ್ಕಳ ಸುರಕ್ಷಾ ಸಮಿತಿಯ ಸದಸ್ಯರಾದ ಎಲ್ಸಿ, ಮುಖ್ಯೋಪಾಧ್ಯಾಯಿನಿ ಎ.ಬಿ. ಸ್ವಾತಿ ಹಾಗೂ ಶಾಲಾ ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ವೀರಾಜಪೇಟೆ: ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘ ಸ್ಥಾಪನೆಯನ್ನು ನೆರವೇರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಪಾಲ್ಗೊಂಡು ಮಾತನಾಡಿ, ದಂತ ವೈದ್ಯಕೀಯ ಕಾಲೇಜಿನ ಸೇವೆ ಹಾಗೂ ಸಾಧನೆಯನ್ನು ಶ್ಲಾಘಿಸಿದರು.
ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕøತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಂಡಿತು.
ಅಧ್ಯಕ್ಷರಾಗಿ ಸಿತಾರ ಸುಬ್ಬಯ್ಯ, ಕಾರ್ಯದರ್ಶಿಯಾಗಿ ಶ್ವೇತಾ ಲೆಸ್ಲಿ, ಜಂಟಿ ಕಾರ್ಯದರ್ಶಿಯಾಗಿ ತಾರಿಣಿ ಸುಬ್ಬಯ್ಯ, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಅನುಶ್ರೀ, ಮಧುಸೂಧನ್ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವಜಿತ್ ಗಂಗಾಧರನ್ ಆಯ್ಕೆಯಾಗಿದ್ದಾರೆ. ಇತರ ನಾಲ್ವರು ಸದಸ್ಯರು ಆಯ್ಕೆಯಾಗಿದ್ದಾರೆ.ಗೋಣಿಕೊಪ್ಪ ವರದಿ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಪಿ.ಯು. ಕಾಲೇಜು ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ.
ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ನಡೆದ ಬಾಸ್ಕೆಟ್ಬಾಲ್ನಲ್ಲಿ ರನ್ನರ್ ಅಪ್ ಸ್ಥಾನ ಪಡೆದುಕೊಂಡರು. ಫುಟ್ಬಾಲ್ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.
ಸೋಮವಾರಪೇಟೆ: 2017-18ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ನಾಲ್ವರು ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತ ಲ್ಯಾಪ್ಟಾಪ್ ನೀಡಲಾಯಿತು.
ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಲ್ಯಾಪ್ಟಾಪ್ ನೀಡಿದರು.
ತಾಲೂಕು ಮಟ್ಟದಲ್ಲಿ ಅತೀ ಹೆಚ್ಚು ಅಂಕಪಡೆದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕೆ.ಆರ್. ಅಭಿಷೇಕ್ ಹಾಗೂ ಎ. ಕಾವ್ಯ, ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಮೋದ್, ಬಸವನÀಹಳ್ಳಿ ಸರಕಾರಿ ಪ್ರೌಢಶಾಲೆಯ ಕೆ.ಪಿ. ಆಶಾ ಲ್ಯಾಪ್ಟಾಪ್ ಪಡೆದುಕೊಂಡರು.
ಈ ಸಂದರ್ಭ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಿರ್ವಾಣಿಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
*ಗೋಣಿಕೊಪ್ಪಲು: ವಿದ್ಯಾರ್ಥಿಗಳು ಸೇವಾ ಮನೋಭಾವನೆ ಮೈಗೂಡಿಸಿಕೊಂಡು ವಿದ್ಯಾಭ್ಯಾಸದ ಬಳಿಕ ಉದ್ಯೋಗದ ಜತೆಗೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬೇಕು. ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ಅತ್ಯಂತ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ನಡೆದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸೋಮವಾರಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲೋಕೇಶ್ ಹೇಳಿದರು.
ನೆಲ್ಲ್ಲಿಹುದಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಷ್ಟದಲ್ಲಿರುವ ಜನತೆಗೆ ಸಹಾಯಮಾಡುವದು ಉತ್ತಮ ಪ್ರವೃತ್ತಿಯಾಗಿದೆ. ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕು ಎಂದು ತಿಳಿಸಿದರು.
ಪ್ರಾಂಶುಪಾಲ ಹಾಗೂ ಪ್ರಬಾರ ನಿರ್ದೇಶಕ ಜಿ. ಕೆಂಚಪ್ಪ ಮಾತನಾಡಿ, ನೆಲ್ಲಿಹುದಿಕೇರಿ ಕಾಲೇಜು ಪ್ರತಿವರ್ಷ ಉತ್ತಮ ಫಲಿತಾಂಶ ತರುತ್ತಿದೆ. ಮುಂದೆ ಈ ಕಾಲೇಜು ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಆಗಿ ಪರಿವರ್ತನೆ ಆಗಲಿದೆ. ಈ ಸಂಬಂಧ ಪ್ರಕ್ರಿಯೆ ಮುಂದುವರಿದಿದ್ದು 1 ರಿಂದ 12ನೇ ತರಗತಿವರೆಗಿನ ಶಿಕ್ಷಣ ಒಂದೇ ಸೂರಿನಡಿಯಲ್ಲಿ ಲಭಿಸಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪಿ.ಸಿ. ಅಚ್ಚಯ್ಯ ಮಾತನಾಡಿ, ಕಾಲೇಜು ಆರಂಭಗೊಂಡು 10 ವರ್ಷ ಕಳೆದ ಹಿನ್ನೆಲೆ ಮುಂದಿನ ನವೆಂಬರ್ನಲ್ಲಿ ದಶಮಾನೋತ್ಸವ ಆಚರಿಸಲಾಗುವದು. ಇದೇ ಸಂದರ್ಭದಲ್ಲಿ ನೂತನ ತರಗತಿ ಕೊಠಡಿ, ಹೈಟೆಕ್ ಶೌಚಾಲಯಗಳನ್ನು ಉದ್ಘಾಟಿಸಲಾಗುವದು ಎಂದರು.
ಉಪನ್ಯಾಸಕಿ ಭಾಗ್ಯಜ್ಯೋತಿ, ಪಿ.ವಿ. ಲೋಕೇಶ್, ಚೈತ್ರಶ್ರೀ, ಸೌಮ್ಯಕುಮಾರಿ, ಇಸ್ಮಾಯಿಲ್, ಕವಿಕುಮಾರ್, ಕೆ.ಎಸ್. ಕೃಷ್ಣ ಹಾಜರಿದ್ದರು. ಜುಸ್ತಿನ್ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ನಾಪೆÇೀಕ್ಲು: ಮಡಿಕೇರಿ ತಾಲೂಕು ವನ್ಯಜೀವಿ ಮತ್ತು ನಾಪೆÇೀಕ್ಲು ಶ್ರೀರಾಮ ಟ್ರಸ್ಟ್ ಸಂಸ್ಥೆಯ ಸಹಯೋಗದಲ್ಲಿ ವನ್ಯಜೀವಿಗಳನ್ನು ಸಂರಕ್ಷಿಸುವದು ಮತ್ತು ಬೆಳೆಸುವದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾಪೆÇೀಕ್ಲು ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು.
ಜಾಥದಲ್ಲಿ ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ ಸುರೇಶ್, ಆರ್.ಎಫ್.ಓ ಮರಿಸ್ವಾಮಿ, ಕಾಳೇಗೌಡ, ಸೋಮಣ್ಣಗೌಡ, ವಾಜಿಶ್, ಆರ್.ಆರ್.ಎಫ್.ಓ ಉಮೇಶ್, ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ ವೃಂಧ ಪಾಲ್ಗೊಂಡಿದ್ದರು.ಸೋಮವಾರಪೇಟೆ: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಸಂರಕ್ಷಣೆ-ತ್ಯಾಜ್ಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಕಿರಗಂದೂರು ಪ್ರೌಢಶಾಲೆಯ ಶಿಕ್ಷಕಿ ರಶ್ಮಿ ಅವರು ತ್ಯಾಜ್ಯ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರೆ, ಲಯನ್ಸ್ ಸಂಸ್ಥೆಯ ಸದಸ್ಯ ಪವನ್ ಮುತ್ತಪ್ಪ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು.
ಇದೇ ಸಂದರ್ಭ ಚಿಕ್ಕಮಗಳೂರಿನ ಬ್ರಾಡ್ ವೇ ಕನ್ಸಾಲಿಡೇಟೆಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂಜಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾಡಳಿತ ಮಂಡಳಿಯ ಮಹೇಶ್, ಪಿ.ಕೆ. ಗಣಪತಿ, ಬಿ.ಎಂ. ಚಂದ್ರಾಜು, ಹೆಚ್.ಸಿ. ನಾಗೇಶ್, ಲಯನ್ಸ್ ಅಧ್ಯಕ್ಷ ಯೋಗೇಶ್, ಕಾರ್ಯದರ್ಶಿ ಮಂಜುನಾಥ್ ಚೌಟ, ಶಶಿಕಲ ಚೌಟ, ತೇಜಸ್ವಿನಿ, ಮುಖ್ಯೋಪಾಧ್ಯಾಯಿನಿ ಪಾರ್ವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
*ಗೋಣಿಕೊಪ್ಪಲು: ರಾಷ್ಟ್ರ ಎದುರಿಸುತ್ತಿರುವ ಸಾಮಾಜಿಕ ಮತ್ತು
ಸೋಮವಾರಪೇಟೆ: ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಸಂರಕ್ಷಣೆ-ತ್ಯಾಜ್ಯ ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಕಿರಗಂದೂರು ಪ್ರೌಢಶಾಲೆಯ ಶಿಕ್ಷಕಿ ರಶ್ಮಿ ಅವರು ತ್ಯಾಜ್ಯ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರೆ, ಲಯನ್ಸ್ ಸಂಸ್ಥೆಯ ಸದಸ್ಯ ಪವನ್ ಮುತ್ತಪ್ಪ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು.
ಇದೇ ಸಂದರ್ಭ ಚಿಕ್ಕಮಗಳೂರಿನ ಬ್ರಾಡ್ ವೇ ಕನ್ಸಾಲಿಡೇಟೆಡ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂಜಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾಡಳಿತ ಮಂಡಳಿಯ ಮಹೇಶ್, ಪಿ.ಕೆ. ಗಣಪತಿ, ಬಿ.ಎಂ. ಚಂದ್ರಾಜು, ಹೆಚ್.ಸಿ. ನಾಗೇಶ್, ಲಯನ್ಸ್ ಅಧ್ಯಕ್ಷ ಯೋಗೇಶ್, ಕಾರ್ಯದರ್ಶಿ ಮಂಜುನಾಥ್ ಚೌಟ, ಶಶಿಕಲ ಚೌಟ, ತೇಜಸ್ವಿನಿ, ಮುಖ್ಯೋಪಾಧ್ಯಾಯಿನಿ ಪಾರ್ವತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
*ಗೋಣಿಕೊಪ್ಪಲು: ರಾಷ್ಟ್ರ ಎದುರಿಸುತ್ತಿರುವ ಸಾಮಾಜಿಕ ಮತ್ತು ಸ್ಪರ್ಧೆಯಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು 40 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕ್ಲಬ್ನ ವಿದ್ಯಾರ್ಥಿಗಳಾದ ಮೃದುಲ್, ಚೇತನಾಶ್ರೀ, ಮಿಫ್ಜಲ್, ಮಿಶಾಲ್, ಗಗನ್, ಸೊನಲ್, ಮಾನ್ವಿಕ್, ಸಾಕಿರ್, ಅಕ್ಷಯ್, ವಿಜಯ್, ಶಶಾಂಕ್ ನಾಣಯ್ಯ, ಸುಫೈನಾ, ಸೊಹಾನ್, ಪೂರ್ಣಚಂದ್ರ, ಮೋಕ್ಷಿತ್, ಕರನ್ ದಿವಾಕರ್, ಜಿ.ಕೆ. ರೋಶನ್, ಗ್ಲೆನ್ ಪ್ರಿನ್ಸ್, ನಿರುತ್ ಹಾಗೂ ಸಮರ್ಥ್ ತಲಾ 2 ವಿಭಾಗದಲ್ಲಿ ಸ್ಪರ್ಧಿಸಿದ್ದರು.
ಸಾಕೀರ್, ಚೇತನಾಶ್ರೀ, ಸೊಹಾನ್ ಮತ್ತು ಅಕ್ಷಯ್ ದಸರಾ ಕ್ರೀಡಾ ಕೂಟದ ಚೀಫ್ ಮಿನಿಸ್ಟರ್ ರಫ್ನ ಪಂದ್ಯಕ್ಕೆ ಆಯ್ಕೆಯಾಗಿದ್ದು, ಇದು ಮೈಸೂರಿನಲ್ಲಿ ನಡೆಯಲಿದೆ. ತರಬೇತುದಾರ ಕುಶಾಲ್ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ.
ಸುಂಟಿಕೊಪ್ಪ: ಕುಶಾಲನಗರ ಫಾತಿಮ ಪ್ರಾಥಮಿಕ ಶಾಲಾ ಮಕ್ಕಳು ವಿವಿಧ ಮೇಲಾಟಗಳಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಮರಗೋಡು ಸರಕಾರಿ ಪ್ರೌಢಶಾಲೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಫಾತಿಮಾ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಬಾಲಕರ ಶಟಲ್ ಬ್ಯಾಡ್ಮಿಂಟನ್ನಲ್ಲಿ ಪ್ರಥಮ, ಥ್ರೋಬಾಲ್ನಲ್ಲಿ ದ್ವಿತೀಯ, ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ನಲ್ಲಿ ದ್ವಿತೀಯ ಬಾಲಕಿಯರ ವಾಲಿಬಾಲ್ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಲ್ಲದೆ ಚೆಸ್ನಲ್ಲಿ ರಜತ್ ಗುರುರಾಜ್, ಅಮ್ಮನ್ ಪಟೇಲ್ ಮಾನಸ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಥ್ಲೆಟಿಕ್ನಲ್ಲಿ ಪುನೀತ್, ಉದ್ದ ಜಿಗಿತದಲ್ಲಿ ಮನಿಶ್ ಸಿರಾವಿ ಪ್ರಥಮ ಸ್ಥಾನ, ಎತ್ತರ ಜಿಗಿತದಲ್ಲಿ ವರ್ಷಾ ಸಿರಾವಿ ಪ್ರಥಮ ಸ್ಥಾನ, ಶೀತಲ್ ಕಾವೇರಮ್ಮ ಬಾರದ ಗುಂಡು ಎಸೆತದಲ್ಲಿ ದ್ವಿತೀಯ ಬಾಲಕರ 4x400 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.