ಮಡಿಕೇರಿ, ಅ. 22: ಕೇಂದ್ರ ಲೋಕಸಭಾ ಸಚಿವಾಲಯದ ಗ್ರಾಮೀಣ ಅಭಿವೃದ್ಧಿ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ತಂಡವು ತಾ. 25 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದೆ.
ಗ್ರಾಮೀಣ ಅಭಿವೃದ್ಧಿ ಸಂಸದೀಯ ಸ್ಥಾಯಿ ಸಮಿತಿಯ ತಂಡವು ಅಂದು ಮಧ್ಯಾಹ್ನ 3.15ಕ್ಕೆ ತಿತಿಮತಿಗೆ ಭೇಟಿ ನೀಡಲಿದೆ. ಬಳಿಕ ಸಂಜೆ 4 ಗಂಟೆಗೆ ಪಾಲಿಬೆಟ್ಟ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳು, ಘನ ತ್ಯಾಜ್ಯ ವಿಲೇವಾರಿ ಮತ್ತಿತರ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಜಿ.ಪಂ. ಸಿಇಒ ಲಕ್ಷ್ಮಿಪ್ರಿಯ ಅವರು ತಿಳಿಸಿದ್ದಾರೆ.