ಸೋಮವಾರಪೇಟೆ, ನ. 4: ಇಲ್ಲಿನ ಪೊಲೀಸ್ ಇಲಾಖೆ ವತಿಯಿಂದ ಠಾಣೆಯ ಆವರಣದಲ್ಲಿ ನಡೆದ ಟಿಪ್ಪು ಜಯಂತಿ ಸಂಬಂಧದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದ ಹಲವಷ್ಟು ಮಂದಿ ಟಿಪ್ಪು ಜಯಂತಿ ಸೋಮವಾರಪೇಟೆ, ನ. 4: ಇಲ್ಲಿನ ಪೊಲೀಸ್ ಇಲಾಖೆ ವತಿಯಿಂದ ಠಾಣೆಯ ಆವರಣದಲ್ಲಿ ನಡೆದ ಟಿಪ್ಪು ಜಯಂತಿ ಸಂಬಂಧದ ಶಾಂತಿ ಸಭೆಯಲ್ಲಿ ಭಾಗವಹಿಸಿದ್ದ ಹಲವಷ್ಟು ಮಂದಿ ಟಿಪ್ಪು ಜಯಂತಿ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಎಚ್ಚರಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಬಹುತೇಕ ಮಂದಿ ಟಿಪ್ಪು ಜಯಂತಿ ಆಚರಣೆ ಅನವಶ್ಯಕ ಎಂದು ಅಭಿಪ್ರಾಯಿಸಿದರು. ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಸಾಕಷ್ಟು ಹಾನಿ ಯಾಗಿದೆ. ಪ್ರಾಣ ಹಾನಿಯೊಂದಿಗೆ ಸಾಕಷ್ಟು ಜನರು ಮನೆ ಮಠಗಳನ್ನು ಕಳೆದುಕೊಂಡು ಜೀವನ ನಡೆಸುತ್ತಿ ದ್ದಾರೆ. ಇಲ್ಲಿಯವರೆಗೆ ಹಬ್ಬ ಹರಿದಿನ ಗಳು ಹಾಗೂ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗಿದೆ. ಟಿಪ್ಪು ಜಯಂತಿಯನ್ನು ಆಚರಿಸಬಾರದು ಎಂದು ಮನವಿ ಮಾಡಿದರು.

ಆಟೋ ಚಾಲಕರ ಸಂಘದ ಜಿಲ್ಲಾ ಸಮಿತಿ ಸದಸ್ಯ ಹಸನಬ್ಬ ಮಾತನಾಡಿ, ಈಗಾಗಲೇ ಜನರು ಪ್ರವಾಹದಿಂದ ತತ್ತರಿಸಿದ್ದಾರೆ. ಇದೀಗ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಮುಂದಾಗಿ ಅಶಾಂತಿ ವಾತಾವರಣ ನಿರ್ಮಾಣವಾದರೆ ಮತ್ತೊಮ್ಮೆ ಜನರು ಪರಿತಪಿಸಬೇಕಾಗುತ್ತದೆ, ಜಯಂತಿಯನ್ನು ಆಚರಿಸುವದು ಬೇಡ ಎಂದರು.

ಜಲಾಲಿಯ ಮಸೀದಿಯ ಕಾರ್ಯದರ್ಶಿ ರಫೀಕ್ ಮಾತನಾಡಿ, ಕೇವಲ ರಾಜಕೀಯದ ಲಾಭಕ್ಕಾಗಿ ಟಿಪ್ಪು ಜಯಂತಿಯನ್ನು ಆಚರಿಸುತ್ತಿರು ವದರಿಂದ ಒಂದಾಗಿ ಬದುಕುತ್ತಿರುವ ಜಿಲ್ಲೆಯ ಜನರಲ್ಲಿ ಶಾಂತಿ ಕದಡಲು ಅವಕಾಶವಾಗುತ್ತದೆ. ಟಿಪ್ಪು ಜಯಂತಿ ಆಚರಿಸುವದನ್ನು ನಿಲ್ಲಿಸಿದರೆ ಉತ್ತಮ ಎಂದು ಅಭಿಪ್ರಾಯಿಸಿದರು.

ಆಟೋ ಚಾಲಕರ ಸಂಘದ ಮಾಜಿ ಅಧ್ಯಕ್ಷ (ಮೊದಲ ಪುಟದಿಂದ) ಉಮೇಶ್ ಮಾತನಾಡಿ, ಸರ್ಕಾರಿ ಕಾರ್ಯಕ್ರಮವಾದ ಟಿಪ್ಪು ಜಯಂತಿಯನ್ನು ಆಚರಿಸಿ; ಕಾರ್ಯಕ್ರಮಕ್ಕೆ ಬರುವವರು ಬರುತ್ತಾರೆ. ಯಾರನ್ನೂ ಒತ್ತಾಯ ಮಾಡುವದು ಬೇಡ ಎಂದರು.

ಟಿಪ್ಪು ಜಯಂತಿ ಕಾರ್ಯಕ್ರಮ ಆಚರಿಸುವ ಸಂದರ್ಭ ಯಾರೇ ಆದರೂ, ಕಾನೂನು ವಿರೋಧಿ ಚಟುವಟಿಕೆ ನಡೆಸಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವದು. 2016ರಿಂದ ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದೆ. ಸರ್ಕಾರದ ಆದೇಶವನ್ನು ಪಾಲಿಸುವದು ನೌಕರರ ಕೆಲಸ. ಯಾವದೇ ಸಂದರ್ಭದಲ್ಲಿ ಸಾರ್ವಜನಿಕರ ಶಾಂತಿ ಭಂಗವಾಗುವ ಕೆಲಸ ಮಾಡಬಾರದು ಎಂದು ವೃತ್ತ ನಿರೀಕ್ಷಕರು ಎಚ್ಚರಿಕೆ ನೀಡಿದರು.

ಇದರೊಂದಿಗೆ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ವಿರೋಧಗಳು ವ್ಯಕ್ತವಾದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವದು ಎಂದರು. ಸಭೆಯಲ್ಲಿ ಶನಿವಾರಸಂತೆ ಠಾಣಾಧಿಕಾರಿ ಎಚ್.ಎಂ. ಮರಿಸ್ವಾಮಿ, ಬಿಜೆಪಿ ನಗರಾಧ್ಯಕ್ಷ ಸೋಮೇಶ್, ಹಿಂದೂ ಜಾಗರಣಾ ವೇದಿಕೆಯ ಉಮೇಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್, ಸೇರಿದಂತೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.