ಸಿದ್ದಾಪುರ, ನ. 19: ಸಮೀಪದ ಬಜೆಗೊಲ್ಲಿಯ ಆಲಿತೋಪು ತೋಟದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ದಾಂಧಲೆ ನಡೆಸಿ ಕಾಫಿ, ಕರಿಮೆಣಸು ಸೇರಿದಂತೆ ಬೆಳೆಗಳನ್ನು ನಾಶಮಾಡಿದೆ.

ಪಾಲಿಬೆಟ್ಟ ರಸ್ತೆಯಲ್ಲಿರುವ ಆಲಿತೋಪು ತೋಟದಲ್ಲಿ ಕಳೆದ ಕೆಲವು ದಿನಗಳಿಂದ 8 ಕ್ಕೂ ಅಧಿಕ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ದಾಂಧಲೆ ನಡೆಸುತ್ತಿವೆ. ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.