*ಸಿದ್ದಾಪುರ, ನ. 22: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ದಿಡ್ಡಳ್ಳಿ ಮತ್ತು ಚೊಟ್ಟೆಪಾರೆ ಹಾಡಿಗಳ 18 ಗಿರಿಜನರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ವಿತರಿಸಲಾಯಿತು.
ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ವಿತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತ, ಉಪಾಧ್ಯಕ್ಷೆ ಗಾಯತ್ರಿ ಗ್ರಾಮಾಭಿವೃದ್ಧಿ ಅಧಿಕಾರಿ ರಾಜ, ಗಿರಿಜನ ಮುಖಂಡ ಜೆ.ಕೆ. ಅಪ್ಪಾಜಿ, ಪ್ರಮುಖರಾದ ಅರುಣ, ವಿಜಯ ಹಾಗೂ ಇತರರು ಉಪಸ್ಥಿತರಿದ್ದರು.