ನಾಪೆÇೀಕ್ಲು, ನ. 22: ನೇತಾಜಿ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಡಿ. 2 ರಿಂದ 8 ರವರೆಗೆ ಜಿಲ್ಲಾಮಟ್ಟದ ಶಿಕ್ಷಕರ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ನೇತಾಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದರು.
ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ತರಬೇತಿ ಶಿಬಿರವನ್ನು ಆಯೋಜಿಸುವಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ. ಶಿಬಿರದಲ್ಲಿ ಜಿಲ್ಲೆಯ 80 ಜನ ಶಿಕ್ಷಕರು ತರಬೇತಿ ಪಡೆಯಲಿದ್ದು, ಅವರಿಗೆ ಊಟ, ವಸತಿ, ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಯ ಪದಾಧಿಕಾರಿಗಳು ಶಿಬಿರದ ಯಶಸ್ಸಿಗೆ ಕೈಜೋಡಿಸಬೇಕು ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ ಶಿಬಿರದಲ್ಲಿ ಆರು ದಿನಗಳ ಕಾಲ ಶಿಕ್ಷಕರಿಗೆ ತರಬೇತಿ ನೀಡಲಾಗುವದು. ನಿರಂತರವಾಗಿ ನಡೆಯುವ ತರಬೇತಿಯಲ್ಲಿ ಸಾಂಸ್ಕøತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವದು ಎಂದರು. ಈ ಸಂದರ್ಭದಲ್ಲಿ ಆಹಾರ ಸಮಿತಿ, ವಸತಿ ಸಮಿತಿ, ನೀರು ಮತ್ತು ನೈರ್ಮಲ್ಯ ಸಮಿತಿ, ಪ್ರಚಾರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಪ್ರಧಾನ ಆಯುಕ್ತ ಕಂಬೀರಂಡ ಕಿಟ್ಟು ಕಾಳಪ್ಪ, ವಿದ್ಯಾಸಂಸ್ಥೆಯ ನಿರ್ದೇಶಕರಾದ ಚಂಗೇಟಿರ ಅಚ್ಚಯ್ಯ, ನುಚ್ಚಿಮಣಿಯಂಡ ಚಿಂಗಪ್ಪ, ತೋಲಂಡ ಅರುಣ್ ಕಾವೇರಪ್ಪ, ಬೊಟ್ಟೋಳಂಡ ಮಿಟ್ಟು ಪೂಣಚ್ಚ, ಬಾಬಿ ಭೀಮಯ್ಯ, ಮಹಿಳಾ ಸಮಾಜದ ಅಧ್ಯಕ್ಷ ಮೂವೇರ ರೇಖಾ ಪ್ರಕಾಶ್ ಮತ್ತು ಶಿಕ್ಷಕ ವೃಂದ ಪಾಲ್ಗೊಂಡಿದ್ದರು.