ವೀರಾಜಪೇಟೆ, ನ. 22: ಕೆನರಾ ಬ್ಯಾಂಕ್‍ನ 113ನೇ ಸ್ಥಾಪಕರ ದಿನಾಚರಣೆ ಅಂಗವಾಗಿ ವೀರಾಜಪೇಟೆ ಶಾಖೆಯ ವತಿಯಿಂದ ಕೆನರಾ ವಿದ್ಯಾಜ್ಯೋತಿ ಯೋಜನೆಯಡಿಯಲ್ಲಿ ವೀರಾಜಪೇಟೆಗೆ ಸಮೀಪದ ದೇವಣಗೇರಿ ಪ್ರೌಢಶಾಲೆಯ ಪರಿಶಿಷ್ಟ ಜಾತಿ-ಪಂಗಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳಿಗೆ ತಲಾ 5,000 ರೂ.ಗಳಂತೆ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು.

ಈ ಸಂಬಂಧ ಕಾರ್ಯಕ್ರಮದಲ್ಲಿ ಬ್ಯಾಂಕ್‍ನ ಮುಖ್ಯ ವ್ಯವಸ್ಥಾಪಕ ರಾಮಚಂದ್ರ, ಶಾಖಾ ವ್ಯವಸ್ಥಾಪಕಿ ಹಿಮಾ ಜಿ. ಮೋಹನ್, ಸಂಸ್ಥೆಯ ಮುಖ್ಯ ಶಿಕ್ಷಕ ಲೋಕೇಶ್, ಬ್ಯಾಂಕ್‍ನ ಅಧಿಕಾರಿ ಅಂಜು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.