ಕುಶಾಲನಗರ, ಡಿ. 19: ವೈಕುಂಠ ಏಕಾದಶಿ ಅಂಗವಾಗಿ ಕುಶಾಲನಗರ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ವಿಧಿಗಳು ಜರುಗಿದವು.

ಬೆಳಿಗ್ಗೆಯಿಂದ ದೇವಾಲಯದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು, ಅಭಿಷೇಕ ನಡೆಯಿತು. ಅರ್ಚಕರಾದ ಸುಬ್ಬುರಾಂ ಭಟ್ ಮತ್ತು ಪ್ರಮೋದ್ ಭಟ್ ನೇತೃತ್ವದ ಅರ್ಚಕರ ತಂಡದ ಸದಸ್ಯರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಪೂಜಾ ಕೈಂಕರ್ಯದ ಅಂಗವಾಗಿ ಮಹಿಳಾ ಭಜನಾ ಮಂಡಳಿಯಿಂದ ವಿಶೇಷ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ವಾಸವಿ ಯುವಜನ ಸಂಘ, ಯುವತಿಯರ ಸಂಘ, ಮಹಿಳಾ ಮಂಡಳಿಯ ಪದಾಧಿಕಾರಿಗಳು, ಪ್ರಮುಖರು ಇದ್ದರು.