ಶನಿವಾರಸಂತೆ, ಡಿ. 19: ಪಟ್ಟಣದ ಶ್ರೀರಾಮ ಮಂದಿರದಲ್ಲಿ ತಾ. 20ರ ಸಂಜೆ 4 ಗಂಟೆಯಿಂದ ಹನುಮ ಜಯಂತಿಯನ್ನು ಆಚರಿಸಲಾಗುವದು.

ಸಂಜೆ ಅರ್ಚಕ ನಾಗೇಶ್ ಭಟ್ ಅವರ ನೇತೃತ್ವದಲ್ಲಿ ಸ್ವಾಮಿಗೆ ಅಭಿಷೇಕ, ಹೋಮ-ಹವನ, ಮಹಾ ಮಂಗಳಾರತಿ ನಡೆಯಲಿದೆ. ರಾತ್ರಿ 8 ಗಂಟೆಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.