ಸುಂಟಿಕೊಪ್ಪ, ಡಿ. 25: ತೋಟದ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಂಟಿಕೊಪ್ಪ ಸಮೀಪದ ಬಾಳೆಕಾಡು ತೋಟದ ಲೈನ್ ಮನೆಯಲ್ಲಿ ವಾಸವಿದ್ದ ರಾವುಣ್ಣಿ ಅವರ ಪುತ್ರ ಬಾಲಕೃಷ್ಣ (40) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗೊಳ ಪಡಿಸಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.