ಕೂಡಿಗೆ, ಡಿ. 28: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮ ಹಾಗೂ ಬಸನತ್ತೂರು ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಾರಂಗಿ ನದಿ ದಡ ಸಮೀಪದಲ್ಲಿ ರುದ್ರಭೂಮಿಯನ್ನು ನಿರ್ಮಾಣ ಮಾಡಲಾಗಿದೆ.

ಆದರೆ ಅಲ್ಲಿಗೆ ಹೋಗುವ ದಾರಿ ಒತ್ತುವರಿ ಆಗಿರುವದರಿಂದ ಅದನ್ನು ತೆರವುಗೊಳಿಸಿ ತಿರುಗಾಡಲು ದಾರಿ ಮಾಡಿಕೊಡಬೇಕೆಂದು ಈ ವ್ಯಾಪ್ತಿಯ ಸಾರ್ವಜನಿಕರ ಆಗ್ರಹವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಅರ್ಜಿ ಸಲ್ಲಿಸಿದರೂ ಇದುವರಗೆ ಯಾವದೇ ಪ್ರಯೋಜನ ಅಗಿಲ್ಲವೆಂದು ಇಲ್ಲಿನ ಪ್ರಮುಖರಾದ ಮಂಜುನಾಥ, ದಾಸ್, ರವಿ, ನವೀನ ಸೇರಿದಂತೆ ಅನೇಕ ವಿವಿಧ ಸಂಘಟನೆಯ ಪ್ರಮುಖರು ಆಗ್ರಹಿಸಿದ್ದಾರೆ.

ಕಂದಾಯ ಇಲಾಖೆಯ ಅಧಿಕಾರಿ ವರ್ಗದವರು ಸ್ಥಳ ಪರಿಶೀಲಿಸಿದರೂ ಯಾವದೇ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಗಮನಹರಿಸದಿದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಪ್ರತಿಭಟನೆ ಮಾಡಲಾಗುವದು ಎಂದು ಎಚ್ಚರಿಸಿದ್ದಾರೆ.