ಸುಂಟಿಕೊಪ್ಪ, ಡಿ. 27: ಇಲ್ಲಿನ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದ 48ನೇ ವಾರ್ಷಿಕ ಮಂಡಲ ಪೂಜಾ ಮಹೋತ್ಸವವು ಶೃದ್ಧಾಭಕ್ತಿಯಿಂದ ನೆರವೇರಿತು. ಅಯ್ಯಪ್ಪ ಸ್ವಾಮಿ ಕ್ಷೇತ್ರದ 48ನೇ ವಾರ್ಷಿಕ ಮಂಡಲ ಪೂಜಾ ಮಹೋತ್ಸವದ ಅಂಗವಾಗಿ ದೇವಾಲಯದ ಆವರಣವನ್ನು ತಳಿರುತೋರಣ, ವಿವಿಧ ಬಗೆಯ ಹೂವಿನಿಂದ ಅಲಂಕಾರ ಹಾಗೂ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.

ಪೂಜೋತ್ಸವದ ಅಂಗವಾಗಿ ಬೆಳಿಗ್ಗೆ 6.45 ಗಂಟೆಗೆ ಗಣಪತಿ ಹೋಮ, 7.30 ಗಂಟೆಗೆ ಚಂಡೆ ಮೇಳ, 9 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ಪಂಚಾಮೃತಾಭಿಷೇಕ, 12 ಗಂಟೆಗೆ ಪೂಜೆ, 12.30 ಗಂಟೆಗೆ ಲಕ್ಷಾರ್ಚನೆ, ಪಲ್ಲಪೂಜೆ, ವಿಶೇಷ ಪೂಜೆ ಬಿಲ್ವಪತ್ರೆ ಆರ್ಚನೆ, ತುಳಸಿ ಆರ್ಚನೆ, ಪಂಚಾಮೃತ ಅಭಿಷೇಕ ಹಾಗೂ ದೂರ್ವಾಸನಾ ಪೂಜೆಯನ್ನು ಆರ್ಚಕರಾದ ಗಣೇಶ ಉಪಾಧ್ಯಾಯ ಮತ್ತು ತಂಡದೊಂದಿಗೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಅಯ್ಯಪ್ಪ ವೃತಧಾರಿಗಳು, ಭಕ್ತಾಧಿಗಳು ಹಾಗೂ ಶಾಲಾ ಮಕ್ಕಳು ಮಂಡಲ ಪೂಜೆಯಲ್ಲಿ ಪಾಲ್ಗೊಂಡಿ ದ್ದರು. ಅನ್ನಸಂತರ್ಪಣೆ ಮಾಡಲಾಯಿತು.