ಮಡಿಕೇರಿ, ಡಿ. 31: ಪ್ರವಾಸೋದ್ಯಮ ಇಲಾಖೆಗೆ ಜಿಲ್ಲೆಯ ನೂತನ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಮೈಸೂರು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾಗಿರುವ ಜನಾರ್ಧನ ಹೆಚ್.ಪಿ. ಅವರಿಗೆ ಕೊಡಗು ಜಿಲ್ಲಾ ಇಲಾಖೆಯ ಹೊಣೆಗಾರಿಕೆಯನ್ನು ಹೆಚ್ಚುವರಿಯಾಗಿ ನೀಡಲಾಗಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ತನಕ ಈ ಜವಾಬ್ದಾರಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಯಾಗಿದ್ದ ಜಗನ್ನಾಥ್ ಅವರು ನಿಭಾಯಿಸುತ್ತಿದ್ದರು.