ಕೂಡಿಗೆ ಡಿ. 31: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯದ ಹೆಬ್ಬಾಲೆ ಒಕ್ಕೂಟದಿಂದ ಹೆಬ್ಬಾಲೆ ಶ್ರೀ ಬನಶಂಕರಿ ದೇವಸ್ಥಾನದ ಆವರಣವನ್ನು ಸ್ವಚ್ಛತೆ ಮಾಡಲಾಗಿದೆ ಪೂಜ್ಯರ ಆಶಯದಂತೆ ಮಕರ ಸಂಕ್ರಾತಿಯ ಪ್ರಯುಕ್ತ ಧಾರ್ಮಿಕ ಕ್ಷೇತ್ರಗಳಾದ ಚರ್ಚ್ ಮಸೀದಿ ದೇವಸ್ಥಾನಗಳ ಸ್ವಚ್ಛತೆಯನ್ನು ಮಾಡಲಾಗುತ್ತದೆ. ಹೆಬ್ಬಾಲೆ ಬನಶಂಕರಿ ದೇವಸ್ಥಾನದ ಸುತ್ತ ಗಿಡಗಂಟಿಗಳನ್ನು ತೆಗೆದು ಸ್ವಚ್ಛತೆ ಮಾಡಲಾಗಿದೆ ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸೇವಾ ಪ್ರತಿನಿಧಿ ಕಲ್ಪನಾ ಸೇರಿದಂತೆ ಸದಸ್ಯರು ಹಾಜರಿದ್ದರು.