ಕೂಡಿಗೆ, ಜ.1 : ಕೂಡು ಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂದರ ನಗರದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ವತಿಯಿಂದ 22 ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಂಡಲ ಪೂಜೋತ್ಸವವು ದೇವಾಲಯದ ಆವರಣದಲ್ಲಿ ನಡೆಯಿತು. ಗಣಪತಿ ಹೋಮ, ಮಹಾಮಂಗಳಾರತಿ, ಅನ್ನ ಸಂತರ್ಪಣೆ, ಪಾಲಾಕೊಂಬ ಉತ್ಸವ, ಕೊಂಡ ಹಾಯುವದು ಸೇರಿದಂತೆ ಪೂಜಾ ಕಾರ್ಯಕ್ರಮಗಳು ನಡೆದವು. ಈ ಪೂಜೋತ್ಸವದಲ್ಲಿ ಸುಂದರ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅನೇಕ ಭಕ್ತರು ಭಾಗವಹಿಸಿದ್ದರು.