ಮಡಿಕೇರಿ, ಜ.1: ನಗರದ ಆಕಾಶವಾಣಿ ಕೇಂದ್ರವು ಆಯೋಜಿಸಿದ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನಾಚರಣೆ ಪೂರ್ವಭಾವಿ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಹೇಮಂತ್ ಎಂ.ಎನ್ ದ್ವಿತೀಯ ಪಿ.ಯು.ಸಿ ಮತ್ತು ಗೌತಮ್ ಆರ್. ಪ್ರಥಮ ಪಿ.ಯು.ಸಿ. ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆಕಾಶವಾಣಿ ರಸಪ್ರಶ್ನೆ ಸ್ಪರ್ಧೆಗೆ ಅಯ್ಕೆಯಾಗಿದ್ದು ತಾ. 3 ರಂದು ಬೆಂಗಳೂರು ಆಕಾಶವಾಣಿ ಕೇಂದ್ರದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.