ವೀರಾಜಪೇಟೆ, ಜ. 1: ವೀರಾಜಪೇಟೆ ತಾಲೂಕು ದೇವರಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವೈ.ಸಿ. ಮಂಜು ತಟ್ಟೆ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದಾನೆ. ಈ ಸಾಧನೆಯನ್ನು ಪರಿಗಣಿಸಿ ವಿ.ಎಸ್.ಎಸ್.ಎನ್. ಬ್ಯಾಂಕ್‍ನ ತಿತಿಮತಿ ಶಾಖೆ ಒಂದು ಸಾವಿರ ರೂ.ಗಳ ಚೆಕ್ಕನ್ನು ನೀಡಿ ಪ್ರೋತ್ಸಾಹಿಸಿದೆ. ಈ ಸಂದರ್ಭ ವಿ.ಎಸ್.ಎಸ್.ಎನ್. ವ್ಯವಸ್ಥಾಪಕರು, ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.