ಸೋಮವಾರಪೇಟೆ, ಜ. 1: ಬೆಂಗಳೂರಿನ ಶಾರದಾ ಪ್ರತಿಷ್ಠಾನ, ಶಾಂತಳ್ಳಿಯ ಪ್ರಕೃತಿ ಕವಿ ಬಳಗದ ವತಿಯಿಂದ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.

ಶಾರದಾ ಪ್ರತಿಷ್ಠಾನದ ಪ್ರಮುಖ ರಾದ ಡಾ. ಹುಲಿವಾನ ನರಸಿಂಹಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್‍ಸಾಗರ್, ತಾಲೂಕು ಘಟಕದ ಅಧ್ಯಕ್ಷ ಎಸ್.ಡಿ. ವಿಜೇತ್, ಸಾಹಿತಿ ಹಾಗೂ ವಿಮರ್ಶಕÀ ಭಾರಧ್ವಾಜ್ ಕೆ. ಆನಂದತೀರ್ಥ, ಪಟ್ಟಣ ಪಂಚಾಯಿತಿ ಸದಸ್ಯೆ ನಳಿನಿ ಗಣೇಶ್ ಹಾಗೂ ಕವಿಗೋಷ್ಠಿ ವ್ಯವ ಸ್ಥಾಪಕಿ ರಾಧಿಕಾ ಕಾಳಪ್ಪ ಉಪಸ್ಥಿತರಿದ್ದರು. ಗೋಷ್ಠಿಯಲ್ಲಿ ಕೊಡಗು ಸೇರಿದಂತೆ ಹಾಸನ, ಮೈಸೂರು, ಬೆಂಗಳೂರಿನ ಕವಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಗಮನ ಸೆಳೆದರು.