ಸುಂಟಿಕೊಪ್ಪ, ಜ. 4: ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಕಾರನ್ನು ಕ್ರೇನ್ ಮೂಲಕ ಸ್ಥಳಾಂತರಿಸುವ ಸಂದರ್ಭ ಕೆ.ಎಸ್.ಆರ್.ಟಿ.ಸಿ. ಬಸ್‍ಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ.

ತಾ. 3ರಂದು ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ (ಕೆ.ಎ.47 ಎಂ.6446) ಕಾರು ರಾತ್ರಿ 11.30ರ ಸಮಯದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಶಾಂತಗಿರಿ ಸಮೀಪವಿರುವ ಕೂರ್ಗ್‍ಳ್ಳಿ ತೋಟದೊಳಕ್ಕೆ ನುಗ್ಗಿದೆ. ಇದರಿಂದ ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರಿನಲ್ಲಿದ್ದ ಇತರರು ಸಣ್ಣಪುಟ್ಟ ಗಾಯಕ್ಕೊಳಗಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಕಾರನ್ನು ಸ್ಥಳಾಂತರಿಸುವ ಸಂದರ್ಭ ಕ್ರೇನ್ ಮೂಲಕ ಹೊರಕ್ಕೆ ತಂದು ಹೆದ್ದಾರಿ ಮೂಲಕ ಸುಂಟಿಕೊಪ್ಪ ಠಾಣೆಗೆ ತರಲಾಗುತಿತ್ತು. ಕಾರು ತೋಟದ ಒಳಗೆ ಬಿದ್ದ ಸ್ಥಳದಿಂದ ಅನತಿ ದೂರದಲ್ಲಿ ಕಾರಿನ ಮುಂಭಾಗಕ್ಕೆ ಕಟ್ಟಿದ್ದ ಬೆಲ್ಟ್ ಕಳಚಿಕೊಂಡಿದ್ದು, ಕಾರು ರಸ್ತೆಯ ಬಲಭಾಗಕ್ಕೆ ಬಿದ್ದಿದ್ದು ಇದೇ ಸಂದರ್ಭದಲ್ಲಿ ಸುಂಟಿಕೊಪ್ಪದಿಂದ ಮಲ್ಲಪುರಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‍ಗೆ ಡಿಕ್ಕಿಯಾಗಿದೆ.