ಚೆಟ್ಟಳ್ಳಿ, ಜ. 5: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಬೇಕೆಂದು ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಕರೆ ನೀಡಿದರು.

ಚೆಟ್ಟಳ್ಳಿ ಪ್ರೌಢಶಾಲೆಯ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಬಹಳಷ್ಟು ಸೌಲಭ್ಯಗಳಿವೆ. ಇವೆಲ್ಲವನ್ನೂ ಉತ್ತಮ ಶಿಕ್ಷಣಕ್ಕಾಗಿ ಬಳಸಿಕೊಳ್ಳಲು ಕರೆ ನೀಡಿದರು.

ಕ್ರೀಡೋತ್ಸವದ ಜ್ಯೋತಿ ಬೆಳಗಿ ಕಾರ್ಯಕ್ರಮಕ್ಕೆ ಶಾಲೆಯ ಹಳೆಯ ವಿದ್ಯಾರ್ಥಿ ಕೆ.ಎ. ಹರಿಶ್ಚಂದ್ರ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಆಟೋಟ ಸ್ಪರ್ಧೆಗಳು ನಡೆಯಿತು. ವಾರ್ಷಿಕ ವರದಿಯನ್ನು ಶಿಕ್ಷಕ ಸತ್ಯನಾರಾಯಣ ಮಂಡಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪೇರಿಯನ ಜಯಾನಂದ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ದಿಲೀಪ್ ಅಪ್ಪಚ್ಚು, ಸಂಚಾಲಕ ರತ್ತು ಚಂಗಪ್ಪ, ಸಿ.ಎ. ಮುದ್ದಮ್ಮಯ್ಯ, ಉನೈಸ್ ಹಾಗೂ ಶಿಕ್ಷಕ ವೃಂದದವರು ಇದ್ದರು.