ನಾಪೆÇೀಕ್ಲು, ಜ. 6: ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳದಲ್ಲಿ ದೀಪಾಲಂಕಾರ ಪೂಜೆ ನಡೆಯಿತು.
ನಂತರ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಖಾತ್ರಿಗೆ ಪೂರಕವಾಗಿ ಕುಲಶಾಸ್ತ್ರ ಅಧ್ಯಯನ ನಡೆಸಲು ಸಿಎನ್ಸಿಯ ಸತತ ಪ್ರಯತ್ನದಿಂದ ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ಕುಲಶಾಸ್ತ್ರ ಅಧ್ಯಯನಕ್ಕೆ ಅಧಿಕೃತ ಆದೇಶ ನೀಡಿದೆ. ದೈವ ಕೃಪೆಯಿಂದ ಈ ಕಾರ್ಯ ಸಾಧ್ಯವಾದ ಹಿನ್ನೆಲೆಯಲ್ಲಿ ಕುಲಶಾಸ್ತ್ರ ಅಧ್ಯಯನ ಪರಿಪೂರ್ಣವಾಗಿ ನಡೆದು ಕೊಡವ ಬುಡಕಟ್ಟು ಕುಲಕ್ಕೆ ರಾಜ್ಯಾಂಗ ಖಾತ್ರಿ ದೊರಕುವಂತಾಗಲು ಈ ವಿಶೇಷ ಪೂಜೆಯನ್ನು ನಡೆಸಲಾಗಿದೆ ಎಂದರು.
ಪೂಜಾ ಕಾರ್ಯಕ್ರಮದಲ್ಲಿ ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಮದ್ರೀರ ಕರುಂಬಯ್ಯ, ಕಾಂಡೆರ ಸುರೇಶ್, ಅರೆಯಡ ಗಿರೀಶ್, ಅಪ್ಪಾರಂಡ ಪ್ರಕಾಶ್, ಶ್ರೀನಿವಾಸ್, ನಂದಿನಿ ನಂಜಪ್ಪ, ಚಂಬಂಡ ಜನತ್, ಬೇಪಡಿಯಂಡ ಬಿದ್ದಪ್ಪ, ವಿನು, ಪಾರ್ವಂಗಡ ನವೀನ್, ಮಾಚಿಮಾಡ ಲವ ಗಣಪತಿ, ಬಾಚಮಂಡ ಬೆಲ್ಲು, ಕಾಟುಮಣಿಯಂಡ ಉಮೇಶ್, ಗೀತಾ, ಮುತ್ತಪ್ಪ ಇದ್ದರು.