ಕುಶಾಲನಗರ, ಜ. 9: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಟ್ಟಣದ ಶ್ರೀ ಗಣಪತಿ ದೇವಾಲಯ ಆವರಣ ಸ್ವಚ್ಛತಾ ಕಾರ್ಯ ನಡೆಯಿತು. ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್.ವಸಂತಕುಮಾರ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.
ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕ ಕೆ. ಹರೀಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ದೇವಾಲಯ ಸಮಿತಿ ಕಾರ್ಯದರ್ಶಿ ಎಸ್.ಕೆ. ಶ್ರೀನಿವಾಸ ರಾವ್, ದೇವಾಲಯ ಒಕ್ಕೂಟದ ಪ್ರಮುಖ ಡಿ.ಆರ್. ಸೋಮಶೇಖರ್, ಕೊಡವ ಸಮಾಜ ಮಾಜಿ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಯೋಜನೆಯ ಸೇವಾ ಪ್ರತಿನಿಧಿಗಳಾದ ಯಶೋಧ, ಜಯಲಕ್ಷ್ಮಿ, ಡಾಟಿ ಮತ್ತಿತರರು ಇದ್ದರು.