ಸೋಮವಾರಪೇಟೆ, ಜ.10: ಜಿ.ಪಂ., ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾಗಾಂಧಿ ಕುರಿತಾದ ‘ಬಾಪು ಗಾಂಧಿ-ಗಾಂಧಿ ಬಾಪು’ ರಂಗ ರೂಪಕ ತಾ. 11ರಂದು(ಇಂದು) ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಸಂತ ಜೋಸೆಫರ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ತಹಶೀಲ್ದಾರ್ ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿಗೋಪಾಲ್, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಿನಯ್, ಲೋಕೋಪಯೋಗಿ ಇಲಾಖಾ ಅಭಿಯಂತರ ಶಿವಕುಮಾರ್ ಅವರುಗಳು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕ ಸಜನ್ ಮಂದಣ್ಣ ತಿಳಿಸಿದ್ದಾರೆ.