ಗುಡ್ಡೆಹೊಸೂರು, ಜ. 12: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳ ಸಂತೆ ನಡೆಯಿತು. ಗ್ರಾ.ಪಂ. ಅಧ್ಯಕ್ಷೆÀ ಕೆ.ಎಸ್. ಭಾರತಿ ಸಂತೆಗೆ ಚಾಲನೆ ನೀಡಿದರು.
ಈ ಸಂದÀರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಸ್. ದಿನೇಶ್ ಮತ್ತು ಸದಸ್ಯರು ಹಾಜರಿದ್ದರು. ಗುಡ್ಡೆಹೊಸುರು ಗ್ರಾಮಸ್ಥರಿಗೆ ಸ್ಥಳೀಯವಾಗಿ ಮಂಗಳವಾರ ಕುಶಾಲನಗರ ಸಂತೆಯಾದರಿಂದ ಹಲವು ಸಾರ್ವಜನಿಕರು ಶಾಲಾ ಆವರಣದಲ್ಲಿ ತರಕಾರಿ ಖರೀದಿಸುವ ದೃಶ್ಯಕಂಡು ಬಂತು. ಈ ಸಂದÀರ್ಭ ಶಾಲಾ ಮುಖ್ಯಶಿಕ್ಷಕ ಸಣ್ಣಸ್ವಾಮಿ ಮತ್ತು ಶಿಕ್ಷಕ ವೃಂದ ಹಾಜರಿದ್ದರು.
ಈ ಸಂದÀರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಮಾತನಾಡಿ, ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮ ಮಾಡುವದರಿಂದ ಮಕ್ಕಳಲ್ಲಿ ವ್ಯವಹಾರ ಜ್ಞಾನ ಹೆಚ್ಚುವದಾಗಿ ತಿಳಿಸಿದರು. ಮಕ್ಕಳು ತಮ್ಮ ತಮ್ಮ ಮನೆಗಳಲ್ಲಿ ಬೆಳೆಸಿದ ತರಕಾರಿಗಳನ್ನು ವ್ಯಾಪಾರಕ್ಕಾಗಿ ತಂದಿದ್ದರು.