ಕುಶಾಲನಗರ, ಜ. 16: ಕ್ರಿಕೆಟ್ ಪಟು ಅಪ್ಪಚ್ಚು ಗೆಳೆಯರ ಬಳಗದ ಆಶ್ರಯದಲ್ಲಿ ತಾ. 26 ರಿಂದ ಎರಡು ದಿನಗಳ ಕಾಲ ಕುಶಾಲನಗರದಲ್ಲಿ 4ನೇ ವರ್ಷದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘದ ಪ್ರಮುಖ ಮಣಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವಂಗತ ಅಪ್ಪಚ್ಚು ಉತ್ತಮ ಕ್ರಿಕೆಟ್ ಪಟುವಾಗಿದ್ದರು. ಅವರ ಸ್ಮರಣಾರ್ಥ ಪ್ರತಿ ವರ್ಷದಂತೆ ಈ ಬಾರಿಯು ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿರುವದಾಗಿ ಹೇಳಿದರು.

ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ತಾ. 26 ರಂದು ಪಂದ್ಯಾವಳಿಗೆ ಚಾಲನೆ ನೀಡಲಾಗುವದು. ತಾ. 27 ರಂದು ಸಮಾರೋಪ ಕಾರ್ಯಕ್ರಮ ಹಾಗೂ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಂದ್ಯಾವಳಿಯಲ್ಲಿ ರಾಜ್ಯಮಟ್ಟದ 16 ತಂಡಗಳಿಗೆ ಮಾತ್ರ ಅವಕಾಶವಿದ್ದು, ತಾ. 20 ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕಿದೆ ಎಂದರು. ಹೆಚ್ಚಿನ ಮಾಹಿತಿಗಾಗಿ 9845565410, 9845436060 ಸಂಪರ್ಕಿಸುವಂತೆ ಕೋರಲಾಗಿದೆ.

ಗೋಷ್ಠಿಯಲ್ಲಿ ಅಪ್ಪಚ್ಚು ಗೆಳೆಯರ ಬಳಗದ ಅಧ್ಯಕ್ಷ ಯತೀಶ್, ಪ್ರಮುಖರಾದ ಪವನ್, ಸುರೇಶ್, ಕಿಶೋರ್, ಪ್ರದೀಪ್ ಇದ್ದರು.