ಮಡಿಕೇರಿ, ಜ.17: ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ, ಯುವತಿಯರಿಗೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ಯುವಕ, ಯುವತಿಯರಿಗೆ 2018-19ನೇ ಸಾಲಿನಲ್ಲಿ 5 ತಿಂಗಳ ಯಕ್ಷಗಾನ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ ಪರಿಕರಗಳೊಂದಿಗೆ ಪ್ರದರ್ಶನ ನೀಡಲು ಉದ್ದೇಶಿಸಿದ್ದು, ಯಕ್ಷಗಾನ ಕಲಾಪ್ರಕಾರಗಳಲ್ಲಿ (ತೆಂಕುತಿಟ್ಟು/ಬಡಗುತಿಟ್ಟು ಯಕ್ಷಗಾನ, ಬಡಾಬಡಗುತಿಟ್ಟು ಯಕ್ಷಗಾನ, ಮೂಡಲಪಾಯ, ಕೇಳಿಕೆ, ಘಟ್ಟದಕೋರೆ, ಗೊಂಬೆಯಾಟ, ತಾಳಮದ್ದಲೆ) ತರಬೇತಿ ನೀಡಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಪ್ರತಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಅಕಾಡೆಮಿ ಕಚೇರಿಗೆ ಕಳುಹಿಸಬಹುದು.
ತರಬೇತಿ ನೀಡಬಯಸುವ ಆಸಕ್ತ ಕಲಾವಿದರುಗಳು ಅರ್ಜಿಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿರಸ್ತೆ, ಬೆಂಗಳೂರು 560002 ಇಲ್ಲಿಗೆ ಕಳುಹಿಸಿಕೊಡುವಂತೆ ಕೋರಿದೆ. ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿ ದೂರವಾಣಿ ಸಂಖ್ಯೆ 080-22113146 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.