ಮಡಿಕೇರಿ, ಜ. 18 : ಕುಶಾಲನಗರ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಭುವನಗಿರಿ, ಹೆಬ್ಬಾಲೆ ಮತ್ತು ಇಂಡಸ್ಟ್ರಿಯಲ್ ಫೀಡರ್‍ನ ಮಾರ್ಗದಲ್ಲಿ ಜಿಒಎಸ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವದರಿಂದ ತಾ. 20 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಕೂಡು ಮಂಗಳೂರು, ಕೂಡ್ಲೂರು, ಕೂಡಿಗೆ, ಶಿರಂಗಾಲ, ಹಾರಂಗಿ, ಯಡವನಾಡು, ಸೀಗೆಹೊಸೂರು, ಹೆಬ್ಬಾಲೆ, ತೊರೆನೂರು, ಶಿರಂಗಾಲ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.