ಸೋಮವಾರಪೇಟೆ,ಜ.21: ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನದ ಹಿನ್ನೆಲೆ ತಾ. 22ರಂದು (ಇಂದು) ಸೋಮವಾರಪೇಟೆಯಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ತಿಳಿಸಿದ್ದಾರೆ.
ತಾ. 22ರಂದು ಅಪರಾಹ್ನ 3.30ಕ್ಕೆ ಪಟ್ಟಣದ ಜೇಸೀ ವೇದಿಕೆಯಲ್ಲಿ ಸಂತಾಪ ಸಭೆ ನಡೆಯಲಿದ್ದು, ವಿವಿಧ ಸಮಾಜಗಳ ಮುಖಂಡರುಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
2 ಗಂಟೆಗಳ ಬಂದ್: ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನದ ಹಿನ್ನೆಲೆ ಮೃತರ ಗೌರವಾರ್ಥ ತಾ.22ರಂದು ಅಪರಾಹ್ನ 3 ರಿಂದ 5 ಗಂಟೆಯವರೆಗೆ ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುವದು ಎಂದು ವರ್ತಕರ ಸಂಘದ ಅಧ್ಯಕ್ಷ ಮನುಕುಮಾರ್ ರೈ ತಿಳಿಸಿದ್ದಾರೆ.