ಕುಶಾಲನಗರ, ಜ. 23: ಕುಶಾಲನಗರ ನಂ 122 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಕಟ್ಟಡ ತಾ. 26 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್ ತಿಳಿಸಿದರು.

ಮಾರುಕಟ್ಟೆ ರಸ್ತೆಯಲ್ಲಿರುವ ನೂತನ ಕಟ್ಟಡದ ಪೂಜೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕುಶಾಲನಗರ ಮಾರುಕಟ್ಟೆ ರಸ್ತೆಯಲ್ಲಿ ಅಂದಾಜು 3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸಂಘದ ಕಟ್ಟಡ 5 ಅಂತಸ್ತುಗಳನ್ನು ಒಳಗೊಂಡಿದೆ. ಕಟ್ಟಡದಲ್ಲಿ ಲಿಫ್ಟ್ ಸೌಲಭ್ಯ ಸೇರಿದಂತೆ ಉನ್ನತ ದರ್ಜೆಯ ಸಭಾ ಕೊಠಡಿಗಳು, ಭಾರತೀಯ ರಿಸರ್ವ್ ಬ್ಯಾಂಕ್ ಮಾನದಂಡದಂತೆ ಭದ್ರತಾ ಕೊಠಡಿ, ಸಿಸಿ ಟಿವಿ ವ್ಯವಸ್ಥೆ, ಕುಶಾಲನಗರ, ಜ. 23: ಕುಶಾಲನಗರ ನಂ 122 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಕಟ್ಟಡ ತಾ. 26 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್ ತಿಳಿಸಿದರು.

ಮಾರುಕಟ್ಟೆ ರಸ್ತೆಯಲ್ಲಿರುವ ನೂತನ ಕಟ್ಟಡದ ಪೂಜೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕುಶಾಲನಗರ ಮಾರುಕಟ್ಟೆ ರಸ್ತೆಯಲ್ಲಿ ಅಂದಾಜು 3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸಂಘದ ಕಟ್ಟಡ 5 ಅಂತಸ್ತುಗಳನ್ನು ಒಳಗೊಂಡಿದೆ. ಕಟ್ಟಡದಲ್ಲಿ ಲಿಫ್ಟ್ ಸೌಲಭ್ಯ ಸೇರಿದಂತೆ ಉನ್ನತ ದರ್ಜೆಯ ಸಭಾ ಕೊಠಡಿಗಳು, ಭಾರತೀಯ ರಿಸರ್ವ್ ಬ್ಯಾಂಕ್ ಮಾನದಂಡದಂತೆ ಭದ್ರತಾ ಕೊಠಡಿ, ಸಿಸಿ ಟಿವಿ ವ್ಯವಸ್ಥೆ, ಬಾಳಿಕೆ ಬರುವಷ್ಟು ಗುಣಮಟ್ಟದಿಂದ ಕೂಡಿದೆ. 5 ಅಂತಸ್ತಿನ ಕಟ್ಟಡದಲ್ಲಿ 3 ಅಂತಸ್ತುಗಳು ಸೇರಿದಂತೆ ಹಳೆಯ ಕಚೇರಿ ಕಟ್ಟಡವನ್ನು ಬಾಡಿಗೆ ನೀಡಿ ಸಂಘ ಆದಾಯ ಗಳಿಸಲಿದೆ ಎಂದರು.

ಸುಮಾರು 3100 ಸದಸ್ಯರನ್ನು ಒಳಗೊಂಡ ಸಂಘದ ಕಚೇರಿ ಕಳೆದ 98 ವರ್ಷಗಳಿಂದ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿದೆ. 1921 ರಲ್ಲಿ ಪ್ರಾರಂಭವಾದ ಸಂಘ ಮುಳ್ಳುಸೋಗೆಯಲ್ಲಿ ಕಚೇರಿ ಹೊಂದಿತ್ತು. ಕಳೆದ ಸಾಲಿನಲ್ಲಿ ಸಂಘ 1 ಕೋಟಿ 5 ಲಕ್ಷ ರೂ.ಗಳ ನಿವ್ವಳ ಲಾಭ ಪಡೆದಿದೆ. ರೈತ, ಬಡ ಹಾಗೂ ಮಧ್ಯಮ ವರ್ಗದ ಜನರ ಸದಸ್ಯತ್ವ ಹೊಂದಿರುವ ಸಂಘ ಕಳೆದ ಸಾಲಿನಲ್ಲಿ 240 ಕೋಟಿ ರೂ.ಗಳ ವ್ಯವಹಾರ ನಡೆಸಿದೆ ಎಂದು ತಿಳಿಸಿದರು.

ತಾ. 26 ರಂದು ಬೆಳಿಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಸಹಕಾರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಾಜಿ ಸಚಿವರು, ಹಿರಿಯ ಸಹಕಾರಿ ಯಂ.ಸಿ. ನಾಣಯ್ಯ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್, ಸಹಕಾರ ಸಂಘಗಳ ಉಪ ನಿಬಂಧಕ ಬಾಸ್ಕರಾಚಾರ್, ಸಹಾಯಕ ನಿಬಂಧಕ ಹೆಚ್.ಡಿ .ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಹಕಾರ ರತ್ನ ಯಂ.ಸಿ. ನಾಣಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವದು ಎಂದರು.

ಈ ಸಂದರ್ಭ ಸಂಘದ ನಿರ್ದೇಶಕರುಗಳಾದ ಹೆಚ್.ಎನ್. ರಾಮಚಂದ್ರ, ಪಿ.ಬಿ. ಯತೀಶ್, ಕೆ.ಎನ್. ಅಶೋಕ್, ವಿ.ಎಸ್. ಆನಂದಕುಮಾರ್, ಎಂ.ಕೆ. ಗಣೇಶ್, ಬಿ.ಎ. ಅಬ್ದುಲ್ ಖಾದರ್, ಸಿ.ಎಂ. ಗಣಿಪ್ರಸಾದ್, ಪಿ.ಎಂ. ಕವಿತ, ಮುಖ್ಯ ಕಾರ್ಯನಿರ್ವಹಣಾಕಾರಿ ಬಿ.ಬಿ. ಲೋಕೇಶ್, ಕಟ್ಟಡ ಸಲಹಾ ಸಮಿತಿ ಸದಸ್ಯ ವಿ.ಪಿ. ಶಶಿಧರ್, ಕೆ.ಪಿ. ಚಂದ್ರಕಲಾ, ಆಲ್ಬರ್ಟ್ ಡಿಸೋಜ, ಆರ್.ಕೆ. ನಾಗೇಂದ್ರ ಬಾಬು ಇದ್ದರು.