ಮಡಿಕೇರಿ, ಜ. 25: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 28 ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ, ತಾ. 29 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಾಗೂ ತಾ. 30 ರಂದು ಮಡಿಕೇರಿ ಗೌಳಿಬೀದಿಯ ಲೋಕಾಯುಕ್ತ ಕಚೇರಿಯಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಗಳನ್ನು ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸ ಲಾಗುವದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ(08272-220797) ಇಲ್ಲಿ ಸಂಪರ್ಕಿಸಬಹುದು ಎಂದು ಮಡಿಕೇರಿಯ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.