ವೀರಾಜಪೇಟೆ. ಜ. 26: ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಕೆಥಾ ಮತ್ತು ಕುಮಿತೆ ವಿಭಾಗದಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಮುಹಮ್ಮದ್ ಅಫ್ನಾನ್ ಎರಡು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕವನ್ನು ಪಡೆದು ಸಾಧನೆಗೈದಿದ್ದಾರೆ. ಇವರು ಬೆಂಗಾಳಿ ಬೀದಿಯ ಎಂ.ಪಿ.ಅಲ್ತಾಫ್ ಅವರ ಪುತ್ರ. ಸನ್ಸಾಯಿ ಎಂ.ವಿ.ಚಂದ್ರನ್ ಅವರ ಶಿಷ್ಯ.