ಮಡಿಕೇರಿ, ಜ. 28: ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತಾ. 30 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 8 ರಿಂದ 9 ಗಂಟೆಯವರೆಗೆ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. 9 ರಿಂದ 10.30 ಗಂಟೆಯವರೆಗೆ ಪ್ರಕೃತಿ ವಿಕೋಪಕ್ಕೆ ಹಾನಿಗೊಳಗಾದ ಮತ್ತು ಪುನರ್ವಸತಿ ಕಾರ್ಯಗಳ ವೀಕ್ಷಣೆ ಮಾಡಲಿದ್ದಾರೆ. 10.30 ಗಂಟೆಯಿಂದ 11 ಗಂಟೆಯವರೆಗೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ನೈಸರ್ಗಿಕ ವಿಕೋಪ ಮತ್ತು ಪುನರ್ವಸತಿ ಕಾರ್ಯಗಳ ಪರಿಹಾರ ವಿತರಣೆ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚರ್ಚಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕರ ಆಪ್ತ ಕಾರ್ಯದರ್ಶಿ ಕೆ.ಆರ್.ಧರ್ಮಪ್ಪ ತಿಳಿಸಿದ್ದಾರೆ.