ಮಡಿಕೇರಿ, ಜ.28: ಕಡಗದಾಳು ಕ್ಯಾಪಿಟಲ್ ವಿಲೇಜ್ನಲ್ಲಿ ಹಿರಿಯ ನಾಗರಿಕರ ವೇದಿಕೆಯ ಸಾಮಾನ್ಯ ಸಭೆ ನಡೆಯಿತು. ಡಾ.ಮನೋಹರ್ ಜಿ.ಪಾಟ್ಕರ್ ಮತ್ತು ಸುಬ್ರಾಯ ಸಂಪಾಜೆ ಅವರು ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಮಾಜಿ ಮಂತ್ರಿ ಎಂ.ಸಿ.ನಾಣಯ್ಯ ಉಪಸ್ಥಿತರಿದ್ದರು. ವೇದಿಕೆಯ ಸ್ಥಾಪಕಾಧ್ಯಕ್ಷ ಸಿ.ಎಂ.ಮಾದಪ್ಪ ಅವರನ್ನು ಸನ್ಮಾನಿಸಲಾಯಿತು. ಕೆ.ಎ.ತಿಮ್ಮಯ್ಯ ಸ್ವಾಗತಿಸಿದರು. ಸದಸ್ಯರುಗಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಕಾರ್ಯದರ್ಶಿ ಪಿ.ಎಸ್.ಅರವಿಂದ ವಂದಿಸಿದರು.