ಮಡಿಕೇರಿ, ಜ.30: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೆರವು ಮತ್ತು ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ದೆಯು ಫೆಬ್ರವರಿ 5 ರಂದು ಬೆಳಗ್ಗೆ 10 ಗಂಟೆಗೆ ಆಯಾಯ ಜಿಲ್ಲೆಯ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಆಯಾಯ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ.

ಜಿಲ್ಲಾ ಮಟ್ಟದಲಿ ್ಲ ವಿಜೇತರಾದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ, ದೂರದರ್ಶನ ಕೇಂದ್ರ, ಬೆಂಗಳೂರು ಇಲ್ಲಿ ಅಂತಿಮ ಹಂತದಲ್ಲಿ ರಾಜ್ಯ ಮಟ್ಟದ ಮೌಖಿಕ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸ ಲಾಗುವದು. ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಗೌರವ ಕಾರ್ಯದರ್ಶಿಯಾದ ಗಿರೀಶ್ ಬಿ.ಕಡ್ಲೇವಾಡ ಅವರು ಕೋರಿದ್ದಾರೆ. ಕಾರ್ಯಕ್ರಮ ಕುರಿತಾದ ಹೆಚ್ಚಿನ ಮಾಹಿತಿಗೆ ಮೊ.9448867705/ 9449530245/ 9483549159/ ಅಥವಾ ಬೆಂಗಳೂರಿನ ಕರಾವಿಪ ಕೇಂದ್ರ ಕಚೇರಿ ದೂ.080-26718939 ಇವರನ್ನು ಸಂಪರ್ಕಿಸಬಹುದು ಎಂದು ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ್ ಬಿ.ಕಡ್ಲೇವಾಡ ಅವರು ತಿಳಿಸಿದ್ದಾರೆ.