ಸಿದ್ದಾಪುರ, ಫೆ. 6: ಕಳೆದ ಸುಮಾರು ವರ್ಷಗಳಿಂದ ವ್ಯಕ್ತಿಯೋರ್ವ ಸ್ಮಶಾನ ಜಾಗವನ್ನು ಒತ್ತುವರಿ ಮಾಡಿಕೊಂಡು ನರ್ಸರಿ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನೆÀ್ನಲೆಯಲ್ಲಿ ಕಂದಾಯ ಇಲಾಖಾಧಿಕಾರಿಗಳು ನರ್ಸರಿಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ನಲವತ್ತೆಕರೆ ಬರಡಿಯ ನಿವಾಸಿ ದೇವಯ್ಯ ಎಂಬವರು ಸ್ಮಶಾನ ಜಾಗವನ್ನು ಒತ್ತುವರಿ ಮಾಡಿಕೊಂಡು ನರ್ಸರಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವಿಚಾರದ ಬಗ್ಗೆ ಗ್ರಾಮಸ್ಥರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಲವಾರು ಬಾರಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಪಂಚಾಯಿತಿಗೂ ದೂರು ನೀಡಿ ನರ್ಸರಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು. ಆದರೂ ಕೂಡ ದೇವಯ್ಯ ನರ್ಸರಿಯನ್ನು ತೆರವುಗೊಳಿಸದೆ ಸ್ಮಶಾನ ಜಾಗದಲ್ಲಿ ನರ್ಸರಿಯನ್ನು ಮುಂದುವರೆ ಸುತ್ತಿದ್ದರು. ಇದರಿಂದಾಗಿ ಗ್ರಾಮಸ್ಥರಿಗೆ ಸಮಸ್ಯೆ ಎದುರಾಗಿತ್ತು. ಈ ಹಿನೆÀ್ನಲೆಯಲ್ಲಿ ನೆಲ್ಯಹುದಿಕೇರಿ ಗ್ರಾ.ಪಂ ಆಡಳಿತ ಮಂಡಳಿ ಹಾಗೂ ಪಿ.ಡಿ.ಓ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ರವರಿಗೆ ದೂರು ನೀಡಿದ ಮೇರೆಗೆ ಮಂಗಳವಾg Àದಂದು ಸೋಮವಾರ ಪೇಟೆ ತಾಲೂಕು ತಹಶೀಲ್ದಾರ್ ಗೋವಿಂದ ರಾಜ್ ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ಹೋಬಳಿ ಕಂದಾಯ ಪರಿವೀಕ್ಷಕ ಕೆ.ಜಿ ರಾಜಶೇಖರ್, ಗ್ರಾಮ ಲೆಕ್ಕಿಗೆ ಅನುಷಾ, ಪಿಡಿಓ ನಂಜುಂಡಸ್ವಾಮಿ, ಠಾಣಾಧಿಕಾರಿ ದಯಾನಂದ್ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ನರ್ಸರಿಯನ್ನು ತೆರವುಗೊಳಿಸಿ ಜಾಗವನ್ನು ವಶಕ್ಕೆ ಪಡೆದುಕೊಳ್ಳಲಾಯಿತು.