ಸಿದ್ದಾಪುರ, ಫೆÉ 9: ಕರಿಮೆಣಸು ಕುಯ್ಯುತ್ತಿದ್ದ ಸಂದರ್ಭ ಸಿಲ್ವರ್ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಹಾಲುಗುಂದದಲ್ಲಿ ನಡೆದಿದೆ. ಗುಂಡ್ಲುಪೇಟೆ ನಿವಾಸಿ ಮಹದೇವ ಶೆಟ್ಟಿ(40)ಮೃತ ದುರ್ದೈವಿ.ಹಾಲುಗುಂದ ನಿವಾಸಿ ರಾಜೇಶ್ ಎಂಬವರ ತೋಟದಲ್ಲಿ ಸಿಲ್ವರ್ ಏಣಿ ಬಳಸಿ ಮೆಣಸು ಕುಯ್ಯುತ್ತಿದ್ದ ಸಂದರ್ಭ ಏಣಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದ್ದು, ಏಣಿಯ ಮೇಲಿದ್ದ ಕಾರ್ಮಿಕ ಮಹದೇವಶೆಟ್ಟಿ ವಿದ್ಯುತ್ ಸ್ಪರ್ಶದಿಂದ ನೆಲಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ದಯಾನಂದ್ ಭೇಟಿ ನೀಡಿ,ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.