*ಗೋಣಿಕೊಪ್ಪಲು, ಫೆ. 10: ಹತ್ತು ಲಕ್ಷ ಅನುದಾನದಲ್ಲಿ ಕಾನೂರು ಗ್ರಾ.ಪಂ. ವ್ಯಾಪ್ತಿಯ ನಿಡುಗುಂಬ ಹಾವು ಕಲ್ಲು ರಸ್ತೆ, ಡಾಂಬರೀಕರಣಕ್ಕೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರೆವೇರಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳು ಈ ಬಾರಿಯ ಮಳೆಗೆ ಕಿತ್ತುಹೋಗಿದೆ.
ಮಳೆಹಾನಿ ವಿಶೇಷ ಅನುದಾನ ಮತ್ತು ಶಾಸಕರ ಅನುದಾನದಲ್ಲಿ ಹಂತಹಂತವಾಗಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾನೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಕಾಡ್ಯಮಾಡ ಭರತ್ ಮಾಚಯ್ಯ, ಗ್ರಾ.ಪಂ. ಅಧ್ಯಕ್ಷೆ ಲತಾಕುಮಾರಿ, ಸದಸ್ಯ ಸುಳ್ಳಿಮಾಡ ದೀಪಕ್, ಶಿಲ್ಪಜಯ, ಆರ್.ಎಂ.ಸಿ. ಸದಸ್ಯ ಸುಜಾ ಬೋಪಯ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ಕಾರ್ಯದರ್ಶಿ ಲಾಲ ಭೀಮಯ್ಯ, ಹಿಂದುಳಿದ ವರ್ಗದ ಅಧ್ಯಕ್ಷ ಚಂದ್ರಶೇಖರ್ ಕಾನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಳಮೇಂಗಡ ವಿವೇಕ್, ಫೆಡರೇಷನ್ ನಿರ್ದೇಶಕ ಮಚ್ಚಮಾಡ ಕಂದ ಭೀಮಯ್ಯ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಯಮುನ ಚಂಗಪ್ಪ, ಟೌನ್ ಬ್ಯಾಂಕ್ ನಿರ್ದೇಶಕರ ಮಲ್ಲಂಡ ಮಧು ದೇವಯ್ಯ ಪ್ರಮುಖರಾದ ಎಂ.ಎಂ. ನಂಜಪ್ಪ, ಜಿ.ಎ. ಗಿರೀಶ್ ಗಣಪತಿ, ರಮೇಶ್, ನಾಣಿ, ಕೊಟ್ಟಂಗಡ ಡಾಲಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.