ಕುಶಾಲನಗರ, ಫೆ. 13: ಕೇಂದ್ರ ಸರಕಾರದ ಯೋಜನೆ, ಕಾರ್ಯಚಟು ವಟಿಕೆಗಳನ್ನು ಮನೆಮನೆಗೆ ತಲಪಿಸುವದು ಕಾರ್ಯಕರ್ತರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್ ಕರೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸನ್ನದ್ದರಾಗುವ ನಿಟ್ಟಿನಲ್ಲಿ ಕಾರ್ಯಕರ್ತರ ಮನೆಯಲ್ಲಿ ಪಕ್ಷದ ಬಾವುಟ ಹಾರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಪ್ರಧಾನಿ ಪಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಾಗಿದೆ ಎಂದರು. ಬೂತ್ ಮಟ್ಟದಿಂದ ರಾಷ್ಟ್ರೀಯ ಮಟ್ಟದ ತನಕ ಪಕ್ಷದ ಕಾರ್ಯಕರ್ತರ ನಿವಾಸದಲ್ಲಿ ಧ್ವಜ ಹಾರಾಟದೊಂದಿಗೆ ಜನರಲ್ಲಿ ವಿಶ್ವಾಸ ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದರು.

ಈ ಸಂದರ್ಭ ಉಪಸ್ಥಿತರಿದ್ದ ಭಾರತೀಯ ಜನತಾ ಪಕ್ಷದ ಕ್ಷೇತ್ರಾಧ್ಯಕ್ಷ ಎಂ.ಎನ್. ಕುಮಾರಪ್ಪ ಮಾತನಾಡಿ, ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತ ‘ಮೇರಾ ಪರಿವಾರ್ ಬಿಜೆಪಿ ಪರಿವಾರ್’ ಎಂಬ ಘೋಷ ವಾಕ್ಯದೊಂದಿಗೆ ಸಕ್ರಿಯವಾಗಿ ಪಕ್ಷದ ಬಲವರ್ಧನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.ಅತ್ತೂರು ವಾರ್ಡ್ ಅಧ್ಯಕ್ಷ ದೇವಪ್ಪ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರ ಮನೆಯಲ್ಲಿ ಪಕ್ಷದ ಧ್ವಜವನ್ನು ಹಾರಿಸಲಾಯಿತು.ಈ ಸಂದರ್ಭ ನಡೆದ ಸರಳ ಕಾರ್ಯಕ್ರಮದಲ್ಲಿ ಗುಡ್ಡೆಹೊಸೂರು ಸ್ಥಾನೀಯ ಸಮಿತಿ ಅಧ್ಯಕ್ಷ ಚಿಮ್ಮ ಉತ್ತಪ್ಪ, ಎಂ.ವಿ. ನಾರಾಯಣ, ಗುಡ್ಡೆಹೊಸೂರು ಗ್ರಾ.ಪಂ. ಸದಸ್ಯರು, ಅತ್ತೂರು ವಾರ್ಡ್ ಸದಸ್ಯರು ಉಪಸ್ಥಿತರಿದ್ದರು. ಪಕ್ಷದ ಪ್ರಮುಖ ಗಣೇಶ್ ಕುಡೆಕ್ಕಲ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಪಂಚಾಯಿತಿ ಸದಸ್ಯೆ ಪುಷ್ಪಾ ನಾಗೇಶ್ ವಂದಿಸಿದರು.