ಮಡಿಕೇರಿ, ಫೆ. 13: ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಕೆ.ಎ. ಯಾಕುಬ್ ನೇಮಕ ಗೊಂಡಿದ್ದಾರೆ. ವಕ್ಫ್ ಸಚಿವ ಜಮೀರ್ ಅಹಮ್ಮದ್ ಅವರು ಯಾಕುಬ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರಿಂದ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿದ ಯಾಕುಬ್, ಮುಂದಿನ ಮೂರು ವರ್ಷಗಳ ಅಧಿಕಾರಾವದಿಯಲ್ಲಿ ವಕ್ಫ್ ವ್ಯಾಪ್ತಿಯ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ನಿಭಾಯಿಸುವದಾಗಿ ಭರವಸೆ ನೀಡಿದರು. ಸರಕಾರದ ಎಲ್ಲಾ ಸೌಲಭ್ಯಗಳು ಅರ್ಹರಿಗೆ ದೊರಕುವಂತೆ ಪಾರದರ್ಶಕವಾಗಿ ಕಾರ್ಯ ನಿರ್ವಹಿಸುವದಾಗಿ ತಿಳಿಸಿದರು.