ಪೆರಾಜೆ, ಫೆ. 19: ಕೇಂದ್ರ ಸರಕಾರದ ವತಿಯಿಂದ ನಡೆಯುತ್ತಿರುವ ನ್ಯಾಷನಲ್ ಯೂಥ್ ಪಾರ್ಲಿಮೆಂಟ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೃಷ್ಣಪ್ರಕಾಶ್ ಪೆರುಮುಂಡ ಆಯ್ಕೆಗೊಂಡಿದ್ದಾರೆ. ತಾ. 27 ರಂದು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇವರು ಕರ್ನಾಟಕ ರಾಜ್ಯದಿಂದ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತಿದ್ದಾರೆ.ಇವರು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪುರುಷೋತ್ತಮ ಮತ್ತು ಸರೋಜಿನಿ ಅವರ ದ್ವಿತೀಯ ಪುತ್ರ. ಪ್ರಸ್ತುತ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಇವರು, ಜೆಸಿಐ ಸುಳ್ಯ ಸಿಟಿಯ ಸದಸ್ಯರಾಗಿ, ಜೆಜೆಸಿ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.