ಮಡಿಕೇರಿ, ಫೆ. 21: ಸಿದ್ದಾಪುರದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸಂಧ್ಯಾ ಎಂಬ ವಿದ್ಯಾರ್ಥಿನಿಯನ್ನು ಅಸ್ಸಾಂ ಮೂಲದ ಇಬ್ಬರೂ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕೃತ್ಯವನ್ನು ಖಂಡಿಸಿ ಮತ್ತು ಸಂಧ್ಯಾಳ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಗೋಣಿಕೊಪ್ಪಲು ನಗರದಾದ್ಯಂತ ಸಾವಿರಕ್ಕು ಹೆಚ್ಚು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು.

ನಗರದ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಲಾಯಿತು. ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ ಹೆಚ್ಚಾಗುತ್ತಿರುವ ಬಗ್ಗೆ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿ ಒತ್ತಾಯಿಸಲಾಯಿತು.

ಈ ಸಂದರ್ಭ ಎ.ಬಿ.ವಿ.ಪಿ.ಯ ಕಾರ್ಯಕರ್ತರಾದ ಪೂಜ್ಯ, ಅಭಿಲಾಷ್, ದೀಪಕ್, ಕಿರಣ್, ವಿದ್ಯಾರ್ಥಿ ನಾಯಕ ಸಿದ್ದೇಶ್, ಜಗನ್, ಮಹಮ್ಮದ್ ಶಾಹೀನ್, ಜಶ್ಮೀರ್ ನೇತೃತ್ವ ವಹಿಸಿದ್ದರು.