ಮಡಿಕೇರಿ, ಫೆ. 21: ಕುಶಾಲನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. 23 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ, ಸೋಮವಾರಪೇಟೆ, ಆಲೂರು-ಸಿದ್ದಾಪುರ, ಸುಂಟಿಕೊಪ್ಪ ಹಾಗೂ ಮಡಿಕೇರಿ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಆಲೂರು-ಸಿದ್ದಾಪುರ, ಗೋಣಿಮರೂರು, ಮಾಲಂಬಿ, ಹೊಸಗುತ್ತಿ, ಗಣಗೂರು ಮಡಿಕೇರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಇ ಸೋಮಶೇಖರ್ ತಿಳಿಸಿದ್ದಾರೆ.