ಸೋಮವಾರಪೇಟೆ, ಫೆ. 21: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ ನಡೆಯಿತು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸೂರಜ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಒದಗಿಸಿದರೆ, ಪೊಲೀಸ್ ಪೇದೆ ಶಿವಕುಮಾರ್ ಫೋಕ್ಸೋ ಕಾಯ್ದೆ ಬಗ್ಗೆ ವಿವರಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚನ್ನಕೇಶವ, ಶಾಲಾ ಮುಖ್ಯೋಪಾಧ್ಯಾಯಿನಿ ಸುಶೀಲ, ಸಂಪನ್ಮೂಲ ವ್ಯಕ್ತಿ ಕಾವೇರಮ್ಮ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೀರು ಮತ್ತು ನೈರ್ಮಲ್ಯದ ಬಗ್ಗೆ ಮಾಹಿತಿ ಒದಗಿಸಿದರು.

ಮಕ್ಕಳ ಸಹಾಯವಾಣಿ ಕೇಂದ್ರದ ಕಾರ್ಯಕರ್ತರಾದ ಬಿ.ಕೆ. ಕುಮಾರಿ, ಯೋಗೇಶ್ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು.