ಕೂಡಿಗೆ, ಫೆ. 21: ಸಮೀಪದ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಮಾ.4 ರಂದು ಮಹಾಶಿವರಾತ್ರಿಯ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಅಂದು ಬೆಳಿಗ್ಗೆ 8.30 ರಿಂದ ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾ ಮೃತ್ಯುಂಜಯ ಹೋಮ, ಶ್ರೀ ರುದ್ರಹೋಮ, ರುದ್ರಾಭಿಷೇಕ ಪೂಜೆಗಳು ನಡೆಯಲಿದೆ. ಸಂಜೆ 4.30 ಕ್ಕೆ ಶ್ರೀ ಉಮಾಮಹೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆಯನ್ನು ವಾದ್ಯಗೋಷ್ಠಿಯೊಂದಿಗೆ ಕ್ಷೇತ್ರ ಪ್ರದಕ್ಷಿಣೆಯ ನಂತರ ಅಲಂಕೃತ ಮಂಟಪದಲ್ಲಿ ಹುದುಗೂರು ಗ್ರಾಮದಲ್ಲಿ ನಡೆಸಲಾಗುತ್ತದೆ. ರಾತ್ರಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಾಲಯದ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.