ಮಡಿಕೇರಿ, ಫೆ. 22: ವಿಕಲಚೇತನ ಇಲಾಖೆಯ ರಾಜ್ಯ ಆಯುಕ್ತ ವಿ.ಎಸ್. ಬಸವರಾಜು ತಾ. 23 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಬೆಳಿಗ್ಗೆ 9.30 ರಿಂದ 11 ಗಂಟೆಗೆವರೆಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ನಂತರ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ಬಗ್ಗೆ ಅರಿವು ಮೂಡಿಸುವದು. 1995ರ ಅಂಗವಿಕಲರ ಅಧಿನಿಯಮದ ಅನುಷ್ಠಾನ ಮತ್ತು ಅಂಗವಿಕಲರ ಹಕ್ಕುಗಳ ರಕ್ಷಣೆ ಕುರಿತು ಶಿಕ್ಷಣ ಇಲಾಖೆಯಲ್ಲಿ ಮಕ್ಕಳ ಶಿಕ್ಷಣ, ಪುನಶ್ಚೇತನ ಮತ್ತು ಮೂಲಭೂ ಸೌಕರ್ಯವನ್ನು ಕಲ್ಪಿಸುವದು ಹಾಗೂ ಶೇ.5 ಆಯವ್ಯಯ ಖರ್ಚು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.