ಮಡಿಕೇರಿ, ಫೆ.25 : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವ ಹಿನ್ನೆಲೆ, ಕ.ವಿ.ಪ್ರ.ನಿ.ನಿ. ಇವರ ಕೋರಿಕೆಯಂತೆ ತಾ. 26 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಪೊನ್ನಂಪೇಟೆ, ವೀರಾಜಪೇಟೆ, ಶ್ರೀಮಂಗಲ, ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು.

ಅದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವೀರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಅಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ ತಿಳಿಸಿದ್ದಾರೆ.